ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರದಲ್ಲಿ: ಹಲವು ಅಭಿವೃದ್ಧಿ ಯೋಜನೆಗಳ ಘೋಷಣೆ; ಶಿಲಾನ್ಯಾಸ, ಅಮೃತ್ ಭಾರತ್ ರೈಲು ಸೇವೆಗೆ ಹಸಿರು ನಿಶಾನೆ
ತಿರುವನಂತಪುರ: ಪ್ರಧಾನ ಮಂತ್ರಿ ನರೇಂದ್ರಮೋದಿ ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ತಿರುವನಂತಪುರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರಿಗೆ ಕೇರಳ ರಾಜ್ಯಪಾಲ ವಿಶ್ವನಾಥ್ ಅರ್ಲೇಕರ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಿಜೆಪಿ ನೇತಾರರೂ ಸೇರಿದಂತೆ ಹಲವು ಗಣ್ಯರು ಭಾವ್ಯ ಸ್ವಾಗತ ನೀಡಿದರು. ನಂತರ ಪ್ರಧಾನಮಂತ್ರಿ ಅಲ್ಲಿಂದ ಪ್ರಧಾನ ಕಾರ್ಯಕ್ರಮ ನಡೆಯುವ ತಿರುವನಂತಪುರ ಪುತ್ತರಿಕಂಡ ಮೈದಾನ ತನಕ ಭರ್ಜರಿ ರೋಡ್ ಶೋ ನಡೆಸಿದರು. ರಸ್ತೆಯುದ್ದಕ್ಕೂ ಸಹಸ್ರಾರು ಮಂದಿ ಜಮಾಯಿಸಿ ಪ್ರಧಾನಿಯವರಿಗೆ ಹೂಮಳೆಗರೆದು ಮುಗಿಲುಮುಟ್ಟುವ ಜೈಕಾರಗಳನ್ನು ಮೊಳಗಿಸಿದರು. ನಂತರ ಪುತ್ತರಿಕಂಡ …