ಕುಂಬಳೆಯಲ್ಲಿ ಬಿಜೆಪಿಯಿಂದ ತ್ರಿಸ್ತರ ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ
ಉಪ್ಪಳ: ತ್ರಿಸ್ತರ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಯು ಕುಂಬಳೆ ಬಿಜೆಪಿ ಕಚೆÃರಿ ಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮುರಳೀ ಧರ ಯಾದವ್ ಉದ್ಘಾಟಿಸಿದರು. ,ಉತ್ತರ ವಲಯ ಬಿಜೆಪಿ ಪ್ರದಾನ ಕಾರ್ಯದರ್ಶಿ ಸುರೇಶ್ ಕುಮಾರ್ ಶೆಟ್ಟಿ ಚುನಾವಣಾ ಮಾಹಿತಿ ನೀಡಿ ದರು. ಕುಂಬಳೆ ಪಂಚಾಯತ್ ದಕ್ಷಿಣ ವಲಯ ಬಿಜೆಪಿ ಅಧ್ಯಕ್ಷ ಸುಜಿತ್ ರೈ ಅಧ್ಯಕ್ಷತೆ ವಹಿಸಿದರು. ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತ ಪುರ, ಉಪಾಧ್ಯಕ್ಷೆ ಪ್ರೇಮಾವತಿ ಶೆಟ್ಟಿ, ಬಿಜೆಪಿ ಕುಂಬಳೆ ಪಂಚಾಯತ್ ಉತ್ತರ ವಲಯ ಅಧ್ಯಕ್ಷ ಶಿವಪ್ರಸಾದ್ ರೈ ಉಪಸ್ಥಿತರಿದ್ದರು.ವಿವೇಕಾನಂದ ಶೆಟ್ಟಿ ಸ್ವಾಗತಿಸಿ,ದಿನೇಶ್ ಕಿದೂರು ವಂದಿಸಿದರು.