ವರ್ಕಾಡಿ: ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಗೆ ಭಾಜನರಾಗಿರುವ ರೂಪಶ್ರೀ ವರ್ಕಾಡಿಯವರನ್ನು ಬಿಜೆಪಿ ವರ್ಕಾಡಿ ಸಮಿತಿ ವತಿಯಿಂದ ಅಭಿನಂದಿಸಲಾಯಿತು. ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮಣಿಕಂಠ ರೈ ಪಟ್ಲ, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಯತಿರಾಜ್ ಶೆಟ್ಟಿ, ಪಂಚಾಯತ್ ಸದಸ್ಯೆ ತುಳಸಿ ಕುಮಾರಿ, ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯೆ, ಪ್ರಧಾನ ಕಾರ್ಯದರ್ಶಿ ನಾಗೇಶ್ ಬಳ್ಳೂರು, ಕೃಷ್ಣಮೂರ್ತಿ ಪ್ರಶಾಂತ್, ರಕ್ಷಣ್ ಅಡೆಕಳಕಟ್ಟೆ, ಪ್ರಶಾಂತ್, ರವಿರಾಜ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.





