ಕಾಸರಗೋಡು: ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಕಾಸರ ಗೋಡು ಮಂಡಲ ಸಮಿತಿ ಕಾರ್ಯಾ ಗಾರ ನಡೆಯಿತು. ಮಂಡಲದ ಚುನಾವಣೆ ಚಟುವಟಿಕೆಗಳ ಹೊಣೆ ವಹಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಅಧ್ಯಕ್ಷತೆ ವಹಿಸಿದರು. ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ಜಯಪ್ರಕಾಶ್, ಸುಕುಮಾರ ಕುದ್ರೆಪ್ಪಾಡಿ, ಚಂದ್ರಶೇಖರ, ಶ್ರೀಧರ ಕೂಡ್ಲು ಮಾತನಾಡಿದರು.







