ಮಾಜಿ ಆಂಬುಲೆನ್ಸ್ ಚಾಲಕ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಆಂಬುಲೆನ್ಸ್ ಮಾಜಿ ಚಾಲಕ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಬಲ್ಲಾ ಕಡಪ್ಪುರ ನಿವಾಸಿ ಅಬ್ದುಲ್ಲ (53) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ 8.15 ರ ವೇಳೆ ಇವರು ಕಾಞಂಗಾಡ್ ರೈಲ್ವೇ ನಿಲ್ದಾಣ ಸಮೀಪ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಿಷಯ ತಿಳಿದು ಹೊಸದುರ್ಗ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯ ಶವಾಗಾವಕ್ಕೆ ತಲುಪಿಸಿದ್ದಾರೆ. ಅಬ್ದುಲ್ಲ ಅರಿಮಲ ಹಾಸ್ಪಿಟಲ್‌ನ ಮಾಜಿ ಆಂಬುಲೆನ್ಸ್ ಚಾಲಕರಾಗಿದ್ದರು.

You cannot copy contents of this page