ಉಪ್ಪಳ: ಮಂಜೇಶ್ವರ ಹೊಸಬೆಟ್ಟುವಿನ ಮನೆಯೊಂದ ರಿಂದ ಮೂರೂವರೆ ಪವನ್ ಚಿನ್ನಾಭರಣ ಹಾಗೂ 8 ಸಾವಿರ ರೂಪಾಯಿ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಹೊಸಬೆಟ್ಟು ಗುಡ್ಡೆಕೇರಿ ಸೀನತ್ ಮಂಜಿಲ್ನ ಸೌದ (41) ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ 2ರಂದು ಬೆಳಿಗ್ಗೆ 11 ಗಂಟೆಯಿಂದ 6ರಂದು ಸಂಜೆ 5 ಗಂಟೆ ಮಧ್ಯೆ ಮನೆಯಿಂದ ನಗ-ನಗದು ಕಳವಿಗೀಡಾಗಿರುವುದಾಗಿ ಸೌದ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮನೆಯೊಳಗೆ ಕಪಾಟಿನಲ್ಲಿರಿಸಿದ್ದ ಚಿನ್ನ ಹಾಗೂ ಹಣವನ್ನು ಕಳವು ನಡೆಸಲಾಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ತನಿಖೆ ಯಂಗವಾಗಿ ಬೆರಳಚ್ಚು ತಜ್ಞರು ಇಂದು ಮನೆಗೆ ತಲುಪಿ ಪರಿಶೀಲನೆ ನಡೆಸಲಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.





