ಕಾಸರಗೋಡು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಎ.26ರಿಂದ ಮೇ 2ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಕ್ಷೇತ್ರ ಧರ್ಮದರ್ಶಿ ನಾರಾಯಣ ಕಾಳ್ಯಂಗಾಡು, ಅರ್ಚಕ ಯೋಗೀಶ್, ಚಪ್ಪರ ಸಮಿತಿಯ ಲವ ಮೀಪುಗುರಿ, ಸುರೇಶ್ ಅಭಿನಂದನ್ರ ನೇತೃತ್ವದಲ್ಲಿ ಜರಗಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ಕ್ಷೇತ್ರ ಮೊಕ್ತೇಸರ ಅಚ್ಯುತ ಕಾಳ್ಯಂಗಾಡ್, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲು, ಉಪಾಧ್ಯಕ್ಷ ಮಿಥುನ್ ಕಾಳ್ಯಂಗಾಡ್, ಕಾರ್ಯದರ್ಶಿ ರಂಜಿತ್ ಮನ್ನಿಪ್ಪಾಡಿ, ಪುಷ್ಪಮ್ಮ ಕಾಳ್ಯಂಗಾಡ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನ್ರಾಜು ಕೊರಕ್ಕೋಡು, ಮಹಿಳಾ ಸಂಘದ ಕಾರ್ಯದರ್ಶಿ ದೀಪಾ ರಾಜೇಶ್, ಪ್ರಶಾಂತ್ ಹಾಗೂ ವಿವಿಧ ಉಪ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು.







