ಕಾಸರಗೋಡು: ಕಾಸರಗೋಡು ಜಿಲ್ಲಾ ಫ್ರೀಲ್ಯಾನ್ಸ್ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ, ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಾಜ್ಯ ಮಟ್ಟದ ಕನ್ನಡ ಪತ್ರಿಕೋಧ್ಯಮ ದಿನಾಚರಣೆ, ಪತ್ರಿಕಾ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಜಿಲ್ಲೆಯಲ್ಲಿ ಕನ್ನಡ ಪತ್ರಿಕೋಧ್ಯಮ ನಡೆದು ಬಂದ ದಾರಿ- ಉಪನ್ಯಾಸ ನಾಳೆ ಸಂಜೆ ೪ ಗಂಟೆಗೆ ಕನ್ನಡ ಗ್ರಾಮದಲ್ಲಿ ನಡೆಯಲಿದೆ. ಈ ವೇಳೆ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಛಾಯಾಗ್ರಾಹಕ ಶ್ರೀಕಾಂತ್ ಕಾಸರ ಗೋಡರನ್ನು ಅಭಿನಂದಿಸಲಾಗುವುದು. ದಿನಪತ್ರಿಕೆಗಳ ಪ್ರದರ್ಶನವನ್ನು ಏರ್ಪಡಿಸಲಾಗುವುದು.







