ಕೊಂಡೆವೂರು ಶ್ರೀಗಳ ಚಾತುರ್ಮಾಸ್ಯ ಸಂಕಲ್ಪ ನಾಳೆ

ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 23ನೇ ಚಾತುರ್ಮಾಸ್ಯ ವೃತ ಸಂಕಲ್ಪ ನಾಳೆ ಗುರುಪೂರ್ಣಿಮೆಯಂದು ನಡೆಯಲಿದೆ. ಬೆಳಿಗ್ಗೆ ಗಣಹೋಮ, ನಿತ್ಯಾನಂದ ಗುರುಗಳಿಗೆ ಪಂಚಾಮೃತಾಭಿಷೇಕ, ವಿಶೇಷ ಸೀಯಾಳಾಭಿಷೇಕ ಬಳಿಕ ವ್ಯಾಸಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಮಹಾಪೂಜೆಯ ನಂತರ ಶ್ರೀ ಗುರುಪಾದುಕಾಪೂಜೆ, ಚಾತುರ್ಮಾಸ್ಯ ಸಂದೇಶ ನೀಡಿ ಶ್ರೀಗಳು ಅನುಗ್ರಹಿಸುವರು. ಚಾತುರ್ಮಾಸ್ಯ ಸಂದರ್ಭದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಮತ್ತು ಯಜ್ಞ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

You cannot copy contents of this page