ಕಾಸರಗೋಡು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಯಾರು ಬಳಿಯ ನಿವಾಸಿಯ ಲಾಪ್ಟಾಪ್ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಬಾಯಾರು ಬಳ್ಳೂರು ನಿವಾಸಿ ಇಬ್ರಾಹಿಂ ಇಹ್ಸಾನ್ ನೀಡಿದ ದೂರಿನಂತೆ ರೈಲ್ವೇ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ಮಧ್ಯಾಹ್ನ 2 ಗಂಟೆ ವೇಳೆ ಏರನಾಡ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ ದೂರುಗಾರನ ಸುಮಾರು 80 ಸಾವಿರ ರೂ. ಮೌಲ್ಯದ ಲಾಪ್ಟಾಪ್ ಒಳಗೊಂಡ ಬ್ಯಾಗ್ ಕಳವಿಗೀಡಾಗಿರುವುದಾಗಿ ದೂರಲಾಗಿದೆ. ಕಣ್ಣೂರು ರೈಲ್ವೇ ನಿಲ್ದಾಣಕ್ಕೆ ತಲುಪಿದಾಗ ಬ್ಯಾಗ್ ಕಳವಿಗೀಡಾದ ಬಗ್ಗೆ ತಿಳಿದುಬಂದಿತ್ತೆನ್ನಲಾಗಿದೆ.






