ಬಂದಡ್ಕ: ಮಾಣಿಮೂಲೆ ಕಣ್ಣಾಡಿತೋಡು ಬಳಿ ಇತ್ತೀಚೆಗೆ ಕಟ್ಟಿ ಹಾಕಿದ್ದ ಸಾಕು ನಾಯಿಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವುದು ಚಿರತೆಯೇ ಆಗಿದೆಯೆಂದು ದೃಢೀಕರಿಸಲಾಗಿದೆ. ಬಂದಡ್ಕ ಸೆಕ್ಷನ್ ಫಾರೆಸ್ಟ್ ಆಫೀಸರ್ ಪಿ. ಶೇಷಪ್ಪ ಎಂಬಿವರು ಈ ಬಗ್ಗೆ ಖಚಿತಪಡಿಸಿದ್ದು, ಸಾರ್ವಜನಿಕರಿಗೆ ಜಾಗ್ರತಾ ನಿರ್ದೇಶ ಹೊರಡಿಸಿದ್ದಾರೆ. ಕಟ್ಟಿ ಹಾಕಿದ ನಾಯಿ ಬೊಗಳುವ ಶಬ್ದ ಕೇಳಿ ಮನೆಯವರು ನೋಡಿದಾಗ ಚಿರತೆ ಓಡಿ ಹೋಗಿತ್ತು. ಈ ಬಗ್ಗೆ ಮಾಹಿತಿ ಲಭಿಸಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತಲುಪಿ ಪರಿಶೀಲಿಸಿದಾಗ ನಾಯಿ ಮೇಲೆ ದಾಳಿ ನಡೆಸಿರುವುದು ಚಿರತೆಯಾಗಿದೆಯೆಂದು ತಿಳಿದುಬಂದಿದೆ. ಕಣ್ಣಾಡಿತೋಡು ಕರ್ನಾಟಕ ಅರಣ್ಯಕ್ಕೆ ಹೊಂದಿಕೊಂ ಡಿರುವ ಪ್ರದೇಶವಾಗಿದೆ. ಆದ್ದರಿಂದ ಈ ಭಾಗದಲ್ಲಿ ಚಿರತೆ ಬರುವ ಸಾಧ್ಯತೆ ಇದೆಯೆಂದು ಅಂದಾಜಿಸಲಾಗಿದೆ. ಈ ಪ್ರದೇಶದಲ್ಲಿ ಅರಣ್ಯ ಇಲಾಖೆ ಗಸ್ತು ನಡೆಸಲಿದೆ. ಅಧಿಕಾರಿಗಳ ನಿರ್ದೇಶವನ್ನು ಪಾಲಿಸುವಂತೆ ತಿಳಿಸಲಾಗಿದೆ





