ಮಲಯಾಳ ಭಾಷಾ ಮಸೂದೆ: ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ನೂತನ ಉಸ್ತುವಾರಿ ಸಚಿವರಿಗೆ ಮನವಿ

ಕಾಸರಗೋಡು: ರಾಜ್ಯದಲ್ಲಿ ಕಳೆದ ಎಡರಂಗ ಸರಕಾರ ಜ್ಯಾರಿಗೆ ತಂದ ಮಲಯಾಳ ಭಾಷಾ ಕಡ್ಡಾಯ ಮಸೂದೆಯಿಂದಾಗಿ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರಿಗೆ ಆಗಬಹುದಾದ ತೊಂದರೆಗಳ ಬಗ್ಗೆ ಹಾಗೂ ಆ ಮಸೂದೆಯಲ್ಲ್ಲಿರುವ ಕನ್ನಡ ವಿರೋಧಿ ಅಂಶಗಳ ಬಗ್ಗೆ ನೂತನ ಸರಕಾರಕ್ಕೆ ಮನವರಿಕೆ ಮಾಡಲು ಮನವಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಜಿಲ್ಲೆಗೆ ತಲುಪಿದ ರಾಜ್ಯ ಸ್ಥಳೀಯಾಡಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಾಜಿಯವರಿಗೆ ಕರ್ನಾಟಕ ಸಮಿತಿ ಮೂಲಕ ಈ ಮನವಿ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ  ತಂಡದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ,ಕ.ಸಾ.ಪ ಗಡಿನಾಡ ಘಟಕ ಅಧ್ಯಕ್ಷ ಡಾ| ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕೇರಳ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ ಎ, ಕರ್ನಾಟಕ ಗಮಕ ಕಲಾ ಪರಿಷತ್ ಅಧ್ಯಕ್ಷ ತೆಕ್ಕೇಕರೆ ಶಂಕರನಾರಾಯಣ ಭಟ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ ಮೊದಲಾ ದವರು ಇದ್ದರು.

RELATED NEWS

You cannot copy contents of this page