ವರ್ಕಾಡಿ: ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಕೊಡ್ಲಮೊಗರು ಜೋಗಿಬೆಟ್ಟು ನಿವಾಸಿ ಲಿಂಗಪ್ಪ ಪೂಜಾರಿಯವರ ಪುತ್ರ ಕೋಟಿ ಜೆ. (39) ನಾಪತ್ತೆಯಾದವರು. ಈ ತಿಂಗಳ 10ರಂದು ಸಂಜೆ 6.30ಕ್ಕೆ ಮನೆಯಿಂದ ಹೊರ ಹೋಗಿದ್ದ ಇವರು ಆ ಬಳಿಕ ಮರಳದೆ ನಾಪತ್ತೆಯಾಗಿದ್ದಾರೆ. ಸಂಬಂಧಿಕರು ವಿವಿಧ ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸಹೋದರ ಚೆನ್ನಯ್ಯ ಜೋಗಿಬೆಟ್ಟು ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಸು ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಇವರು ಪತ್ತೆಯಾದರೆ ಮಂಜೇಶ್ವರ ಠಾಣೆಗೆ ಮಾಹಿತಿ ನೀಡಲು ತಿಳಿಸಿದ್ದಾರೆ.






