ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರ ಛಾಯಾಚಿತ್ರ ಪ್ರತಿಷ್ಠೆ

ಬದಿಯಡ್ಕ: ನೀರ್ಚಾಲು ಕುಮಾರಸ್ವಾಮಿ ಮಂದಿರ ಧಾರ್ಮಿಕ ಶ್ರದ್ಧೆಗೆ ನೀಡಿದ ಕೈಗನ್ನಡಿ. ಮಂದಿರ, ದೇವಸ್ಥಾನ, ಶಾಲೆಗಳು ಸರಿಯಾಗಿದ್ದರೆ ಪೂರ್ಣ ಜನರು ಸಂಸ್ಕಾರವಂತರಾಗುತ್ತಾರೆ ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು. ಅವರು ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರದ ಪುನಃ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಪಂ. ಅಧ್ಯಕ್ಷ ಶಂಕರ ಡಿ., ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ, ಸದಸ್ಯೆ ಬಿಂದ್ಯಾ ಕಾರ್ತಿಕ್, ಡಾ. ಜಯಶ್ರೀ ನಾಗರಾಜ್ ಚೇತನಡ್ಕ, ವಿಹಿಂಪ ಜಿಲ್ಲಾಧ್ಯಕ್ಷ ಜಯದೇವ ಖಂಡಿಗೆ, ನಾರಾಯಣ ಶೆಟ್ಟಿ ಬೇಳ ಶುಭ ಕೋರಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಮಾಸ್ತರ್ ನೀರ್ಚಾಲು ನಿರೂಪಿಸಿದರು. ಅರ್ಚಕ ಸುಬ್ರಹ್ಮಣ್ಯ ಆಚಾರ್ಯ ಸ್ವಾಗತಿಸಿ, ಬಾಲಕೃಷ್ಣ ಆಚಾರ್ಯ ನೀರ್ಚಾಲು ವಂದಿಸಿದರು. ನಿನ್ನೆ ಬೆಳಿಗ್ಗೆ ಮಂದಿರದಲ್ಲಿ ಛಾಯಾಚಿತ್ರ ಪ್ರತಿಷ್ಠೆ ಜರಗಿತ. ಇದರಂಗವಾಗಿ ವಿವಿಧ ವೈದಿಕ ಕಾರ್ಯಕ್ರಮ ನಡೆಯಿತು.

RELATED NEWS

You cannot copy contents of this page