ಭಯೋತ್ಪಾದನಾ ದಾಳಿಗೆ ಸಂಚು: 5 ರಾಜ್ಯಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: ಭಯೋತ್ಪಾದಕ ದಾಳಿಗೆ ಸಂಚು ಹೂಡಿರುವುದಕ್ಕೆ ಸಂಬಂಧಿಸಿ ದೇಶದ 5 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ಮತ್ತು ತಪಾಸಣೆ ಆರಂಭಿಸಿದೆ. ಹೀಗೆ ಈ ಐದು ರಾಜ್ಯಗಳ 28 ಕೇಂದ್ರಗಳಲ್ಲಾಗಿ ಈ ದಾಳಿ ಆರಂಭಿಸಲಾಗಿದೆ. ಇದರಂತೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲ ಕುಲ್ಗಾಮ್ ಅನಂತ್‌ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲೂ ಈ ದಾಳಿ ನಡೆಸಲಾಗುತ್ತಿದೆ.

ಭಯೋತ್ಪಾದನೆಗೆ ಸಂಚು ಮಾತ್ರವಲ್ಲ ಅದಕ್ಕೆ ಪಿತೂರಿ ನೀಡಿದ ಪ್ರಕರಣಗಳಿಗೂ ಸಂಬಂಧಿಸಿ ಈ ದಾಳಿ ನಡೆಸಲಾಗುತ್ತಿದೆ. ಭಾರತದಲ್ಲಿ ಭಯೋತ್ಪಾದನೆ ನಡೆಸಲು ಪಾಕಿಸ್ತಾನದಿಂದ ಆರ್ಥಿಕ ಹಾಗೂ ಇನ್ನಿತರ ಅಗತ್ಯದ ಸಹಾಯಗಳು ಪಾಕ್ ಪ್ರಾಯೋಜಿತ ಭಯೋತ್ಪಾದಕರಿಗೆ ಲಭಿಸಿದ ಬಗ್ಗೆ ಎನ್‌ಐಎಗೆ ಸ್ಪಷ್ಟ ಮಾಹಿತಿ ಲಭಿಸಿದೆ. ಆ ಬಗ್ಗೆ ಸಮಗ್ರ ತನಿಖೆ ನಡೆಸಿ ಅದರ ಹಿಂದಿನ ಷಡ್ಯಂತ್ರಗಳನ್ನು ಬಯಲಿಗೆಳೆಯುವುದೇ ಎನ್‌ಐಎ ಆರಂಭಿಸಿರುವ ದಾಳಿಯ ಪ್ರಧಾನ ಉದ್ದೇಶವಾಗಿದೆ. ಆದರೆ ಇಂದು ಆರಂಭಿಸಲಾಗಿರುವ ದಾಳಿ ಮತ್ತು ಪರಿಶೀಲನೆ ಕುರಿತಾದ ಹೆಚ್ಚಿನ ಮಾಹಿತಿಗಳನ್ನು ಎನ್‌ಐಎ ಇನ್ನೂ ಬಹಿರಂಗಪಡಿಸಿಲ್ಲ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page