ಬದಿಯಡ್ಕ: ಪ್ರಧಾನಮಂತ್ರಿ ನರೇಂದ್ರಮೋದಿಯವರ ೭೬ನೇ ಜನ್ಮ ದಿನಾಚರಣೆಯಂಗವಾಗಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಗೋಸಾಡ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವಿಶೇಷ ಹೂವಿನ ಪೂಜೆ ನಡೆಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾ ಯಿತು. ಬಿಜೆಪಿ ಕಲ್ಲಿಕೋಟೆ ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಭಂಡಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






