ಕಾಸರಗೋಡು: ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ವಠಾರದಲ್ಲಿ 27ರಿಂದ ಸೆ.6ರವರೆಗೆ ಜರಗುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಯಜ್ಞಕುಂಡ ಮುಹೂರ್ತ ರಮೇಶ್ ಕಾರಂತ ಅವರ ನಿರ್ದೇಶನದಲ್ಲಿ ಜರಗಿತು. ಈ ವೇಳೆ ಕ್ಷೇತ್ರದ ಪ್ರಧಾನ ಅರ್ಚಕ ಶಿವಶಂಕರ ಅಡಿಗ, ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ, ಉಪಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, ಪಿ. ರಮೇಶ್, ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಕೆ.ಎನ್, ಕಾರ್ಯದರ್ಶಿ ರವಿ ಕೇಸರಿ, ರವಿ ಕೇಳುಗುಡ್ಡೆ, ಕೋಶಾಧಿಕಾರಿ ಅನಿಲ್ ಕುಮಾರ್, ಉಮೇಶ್ ಮೇಸ್ತ್ರಿ, ಲವ ಮೀಪುಗುರಿ ಹಾಗೂ ಭಕ್ತರು ಉಪಸ್ಥಿತರಿದ್ದರು.
