ಕೆಎಸ್‌ಆರ್‌ಟಿಸಿ ಬಸ್‌ಗಳ ಸುರಕ್ಷತೆ ಖಚಿತಪಡಿಸಲು ತುರ್ತು ಕ್ರಮ ಅಗತ್ಯ- ಎಂ.ಎಲ್. ಅಶ್ವಿನಿ

ಕಾಸರಗೋಡು: ನೀಲೇಶ್ವರ ಬಳಿ ಪಡನಕ್ಕಾಡ್ ಕೆಎಸ್‌ಆರ್‌ಟಿಸಿ ಪ್ರಿಯ ದರ್ಶಿನಿ ಬಸ್‌ನ ಪ್ಲಾಟ್‌ಫಾರ್ಮ್ ಕುಸಿದು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಸರ ಗೋಡಿನಲ್ಲಿ ಸರ್ವೀಸ್ ನಡೆಸುವ ಎಲ್ಲಾ ಸರಕಾರಿ ಬಸ್‌ಗಳ ಫಿಟ್‌ನೆಸ್ ಹಾಗೂ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ನುಡಿದಿದ್ದಾರೆ. ಪ್ರಯಾಣಿಕರು ಮತ್ತು ಉದ್ಯೋಗಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಸ್‌ಗಳ ತುರ್ತು ಸುರಕ್ಷತಾ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. 
ಕೇರಳದ ಅನೇಕ ಹಳೆಯ ಸರಕಾರಿ ಬಸ್‌ಗಳು ಕಾಸರಗೋಡು ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿವೆ. ಕಾಸರಗೋಡು ಜಿಲ್ಲೆಯಲ್ಲಿ ಸರ್ವೀಸ್ ನಡೆಸುತ್ತಿರುವ ಕರ್ನಾಟಕದ ಬಸ್‌ಗಳು, ಕೇರಳದ ಕೆಎಸ್‌ಆರ್‌ಟಿಸಿ ಬಸ್ ಗಳಿಗಿಂತಲೂ ಸುರಕ್ಷಿತ ಮತ್ತು ಹೆಚ್ಚು ಆಧುನಿಕವಾಗಿದೆ. ಹೆಚ್ಚಿನ ಕೇರಳ ಸರಕಾರಿ ಬಸ್‌ಗಳು ತುಕ್ಕು ಹಿಡಿದ ಸ್ಥಿತಿಯಲ್ಲಿವೆ. ಹಳೆಯ ಮತ್ತು ತುಕ್ಕು ಹಿಡಿದ ಬಸ್‌ಗಳು ರಸ್ತೆಗೆ ಇಳಿಯು ವುದನ್ನು  ತಡೆಯಲು ಮೋಟಾರ್ ವಾಹನ ಇಲಾಖೆ ತಕ್ಷಣ ತಯಾರಾಗಬೇಕು. ಅಸ್ತಿತ್ವದಲ್ಲಿರುವ ವಿಮೆ ಮತ್ತು ಫಿಟ್‌ನೆಸ್ ಪ್ರಮಾಣಪತ್ರಕ್ಕೆ ಸಂಬAಧಿಸಿದ ವಿಷಯಗಳಲ್ಲಿ ಇನ್ನಷ್ಟು ಪರಿಶೀಲನೆ ಅಗತ್ಯವಿದೆ ಎಂದು ಎಂ.ಎಲ್. ಅಶ್ವಿನಿ ನುಡಿದರು.
ಪ್ರಿಯದರ್ಶಿನಿ ಬಸ್‌ಗಳನ್ನು ಹೆಚ್ಚಿನ ಪ್ರಯಾಣಿಕರು ಅವಲಂಬಿ ಸಿರುವ ನಿಟ್ಟಿನಲ್ಲಿ, ಅಂತಹ ಬಸ್‌ಗಳ ಸುರಕ್ಷತಾ ತಪಾಸಣೆಗಳನ್ನು ಸಮಯೋ ಚಿತವಾಗಿ ಪೂರ್ಣಗೊಳಿಸಬೇಕು. ಅಪಾಯಗಳು ಸಂಭವಿಸಿದ ನಂತರ ಪರೀಕ್ಷೆಗಳನ್ನು ನಡೆಸುವ ಬದಲು, ಮುಂಚಿತವಾಗಿ ಪತ್ತೆಹಚ್ಚುವ ಕಾರ್ಯವನ್ನು ಕೆಎಸ್‌ಆರ್‌ಟಿಸಿಯಲ್ಲಿ ಜಾರಿಗೆ ತರಬೇಕಿದೆ. ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಎಂ.ಎಲ್. ಅಶ್ವಿನಿ ಆಗ್ರಹಿಸಿದರು. 

You cannot copy contents of this page