ಮುಳ್ಳೇರಿಯ: ದೇಶೀಯ ಅಧ್ಯಾ ಪಕ ಪರಿಷತ್ ಕುಂಬಳೆ ಉಪಜಿಲ್ಲಾ ಸಮಿತಿ ವತಿಯಿಂದ ಸ್ವಾಮಿ ವಿವೇಕಾ ನಂದ ಜಯಂತಿ ಆಚರಿಸಲಾಯಿತು. ಮವ್ವಾರ್ ಗೌರಿಯಡ್ಕ ಶ್ಯಾಮಲಾ ರವಿರಾಜ್ರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಜಿಲ್ಲಾ ಸಮಿತಿ ಅಧ್ಯಕ್ಷ ರಾಮಚಂದ್ರ ಕಾರಡ್ಕ ಅಧ್ಯಕ್ಷತೆ ವಹಿಸಿದರು. ವಿಷ್ಣು ಭಟ್ ಎಡಪ್ಪಾಡಿ ಉದ್ಘಾಟಿಸಿದರು. ರಾಜ್ಯ ಸಮಿತಿ ಉಪಾಧ್ಯಕ್ಷ ಪ್ರಭಾಕರ ಶುಭ ಕೋರಿದರು. ಪುಷ್ಪ, ರವಿರಾಜ್, ಪುರುಷೋತ್ತಮ ಕುಲಾಲ್ ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು. ಶ್ಯಾಮಲಾ ಕುಮಾರಿ ಸ್ವಾಗತಿಸಿ, ದಿನೇಶ್ ವಂದಿಸಿದರು.







