ಕಾಸರಗೋಡು: ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಯುವಕ ಮೃತಪಟ್ಟ ದಾರುಣ ಘಟನೆ ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲೋತ್ ಎಂಬಲ್ಲಿ ಸಂಭವಿಸಿದೆ. ಜೊತೆಗಿದ್ದ ಸ್ನೇಹಿತ ಗಂಭೀರ ಗಾಯಗೊಂಡಿದ್ದಾನೆ. ಮಾಲೋತ್ನ ಬಿನು ಕುಮಾರ್ – ಲತಾ ದಂಪತಿಯ ಪುತ್ರ ಮಿಥುನ್ರಾಜ್ (20) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಂಭೀರ ಗಾಯಗೊಂಡ ಸಚ್ಚು ಎಂಬಾತನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಮುಂಜಾನೆ 1 ಗಂಟೆ ವೇಳೆ ಅಪಘಾತವುಂಟಾಗಿದೆ.
ಕ್ರಿಸ್ಮಸ್ ಕರೋಲ್ ತಂಡದೊಂದಿಗೆ ಸಕ್ರಿಯವಾಗಿ ಪಾಲ್ಗೊಂಡಿದ್ದ ಇವರು ಬಳಿಕ ಮಾಲೋತ್ಗೆ ತೆರಳುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಅಪಘಾತವುಂಟಾಗಿದೆ.







