ಅನಧಿಕೃತ ಹೊಯ್ಗೆ ಸಂಗ್ರಹ: ದೋಣಿ ನಾಶ

ಕುಂಬಳೆ: ಅನಧಿಕೃತವಾಗಿ ಹೊಳೆಗಳಿಂದ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವ ದಂಧೆ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಕುಂಬಳೆ ಠಾಣೆ ಇನ್‌ಸ್ಪೆಕ್ಟರ್ ಕೆ.ಪಿ. ವಿನೋದ್ ಕುಮಾರ್ ನೇತೃತ್ವದಲ್ಲಿ  ಪೊಲೀಸರು ನಿನ್ನೆ ರಾತ್ರಿ 11 ಗಂಟೆ ವೇಳೆ ಶಿರಿಯ ವಳಯಂ ಕಡವಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿ ಹೊಯ್ಗೆ ಸಂಗ್ರಹಿಸಲು  ಬಳಸುತ್ತಿದ್ದ ದೋಣಿಯೊಂದು ಪತ್ತೆಯಾಗಿದ್ದು, ಅದನ್ನು ಜೆಸಿಬಿ ಬಳಸಿ ನಾಶಗೊಳಿಸಲಾಗಿದೆ. ಅಲ್ಲದೆ ಅಲ್ಲಿ ಸಂಗ್ರಹಿಸಿಟ್ಟಿದ್ದ 15 ಲೋಡ್ ಹೊಯ್ಗೆಯನ್ನು ಹೊಳೆಗೆ  ಸುರಿಯಲಾಯಿತು. ಎಸ್‌ಐ ಕೆ. ಶ್ರೀಜೇಶ್, ಎಎಸ್‌ಐ ಪ್ರದೀಪ್ ಎಂಬಿವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page