ಉಪ್ಪಳ ಶ್ರೀ ಅಯ್ಯಪ್ಪ ಮಂದಿರದಲ್ಲಿ ದೀಪೋತ್ಸವ, ಧಾರ್ಮಿಕ ಸಭೆ, ಸನ್ಮಾನ ಕಾರ್ಯಕ್ರಮ

ಉಪ್ಪಳ: ಉಪ್ಪಳ ಶ್ರೀ ಅಯ್ಯಪ್ಪ ಮಂದಿರದಲ್ಲಿ ೫೨ನೇ ವರ್ಷದ ಶಬರಿ ಮಲೆ ಶ್ರೀ ಅಯ್ಯಪ್ಪ ದೀಪೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಆಲುವಾ ತಂತ್ರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಬ್ರಹ್ಮಶ್ರೀ ಮಲ್ಲಪಳ್ಳಿ ಕೃಷ್ಣನ್ ನಂಬೂದಿರಿ, ನಿವೃತ್ತ ಯೋಧರು, ಕರ್ನಾಟಕ ಸರಕಾರ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಕ್ಯಾಂಪ್ಕೋ ನಿದೆðÃಶಕ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಮಂದಿ ರದ ಅಧ್ಯಕ್ಷ ಸತೀಶ್ ಶೆಟ್ಟಿ, ಗೌರವಾಧ್ಯಕ್ಷ ಯು.ಎಂ ಭಾಸ್ಕರ, ಗುರುಸ್ವಾಮಿ ಕುಟ್ಟಿಕೃಷ್ಣನ್ ಉಪಸ್ಥಿತರಿದ್ದರು. ಹಲವಾರು ವರ್ಷಗಳ ಕಾಲ ಅಯ್ಯಪ್ಪ ಮಂದಿರದ ಅಭಿವೃದ್ದಿಗಾಗಿ ಅಹರ್ನಿಶಿ ಸೇವೆ ಸಲ್ಲಿಸಿದ ಧಾರ್ಮಿಕ ಮುಂದಾಳು, ಸಮಾಜ ಸೇವಕ ಮಂದಿರದ ಗೌರವಾಧ್ಯಕ್ಷ ಸೇವಾರತ್ನ ಯು.ಎಂ ಭಾಸ್ಕರರವರನ್ನು ಮಂದಿರದ ಸಮಿತಿ ವತಿಯಿಂದ ಕುಟ್ಟಿಕೃಷ್ಣನ್ ಗುರುಸ್ವಾಮಿ ಯವರನ್ನು ಸನ್ಮಾನಿಸಲಾಯಿತು. ಕೊಂಡೆವೂರು ಮಠ, ಮಲಯಾಳ ಬಿಲ್ಲವ ಸಂಘ ಐಲ, ಉದ್ಯಾವರ ರಾಜ ಬೆಳ್ಚಪ್ಪಾಡರು ಹಾಗೂ ಬಳಗ, ಯುವಭಾರತಿ ಉಪ್ಪಳ, ರಚನಾ ಸಾಂಸ್ಕöÈತಿಕ ಕಲಾ ಸಂಸ್ಥೆ ಉಪ್ಪಳ, ಶಶಿಕಾಂತ್ ಉಪ್ಪಳ ಇವರ ವತಿಯಿಂದಲೂ ಸೇವಾರತ್ನ ಯು.ಎಂ ಭಾಸ್ಕರರವರನ್ನು ಸನ್ಮಾನಿಸಲಾಯಿತು. ಗಂಗಾಧರ ಕೊಂಡೆವೂರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೆ.ಪಿ ನಾಭ ಐಲ ವಂದಿಸಿದರು. ಜಗದೀಶ್ ಪ್ರತಾಪನಗರ ನಿರೂಪಿಸಿದರು.

RELATED NEWS

You cannot copy contents of this page