ಕನ್ಯಪ್ಪಾಡಿಯಲ್ಲಿ ಗಾಂಜಾ ಬೇಟೆ: ಓರ್ವ ಸೆರೆ

ಬದಿಯಡ್ಕ: ಕನ್ಯಪ್ಪಾಡಿಯಲ್ಲಿ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 1.180 ಕಿಲೋ ಗ್ರಾಂ ಗಾಂಜಾ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಬದಿಯಡ್ಕ ಸಮೀಪದ ಮುಖಾರಿಕಂಡದ ಕ್ವಾರ್ಟರ್ಸ್‌ವೊಂದರ ನಿವಾಸಿ ಆಶಿಕ್ ಪಿ.ಎಸ್. (27) ಎಂಬಾತನನ್ನು ಸೆರೆ ಹಿಡಿಯಲಾಗಿದ್ದು, ಆತನ ವಿರುದ್ಧ ಎನ್‌ಡಿಪಿಎಸ್ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬದಿಯಡ್ಕ ಎಕ್ಸೈಸ್ ರೇಂಜ್‌ನ ಇನ್ಸ್‌ಪೆಕ್ಟರ್ ಸುಬಿನ್ ರಾಜ್‌ರ ನೇತೃತ್ವದ ಅಬಕಾರಿ ತಂಡ ಕನ್ಯಪ್ಪಾಡಿಯಲ್ಲಿ ಈ ಕಾರ್ಯಾಚರಣೆ ನಡೆಸಿದೆ. ಬಂಧಿತನನ್ನು ನಂತರ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ. ನ್ಯಾಯಾಲಯದ ಆದೇಶ ಪ್ರಕಾರ ಆತನನ್ನು ನಂತರ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಈ ಅಬಕಾರಿ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಪ್ರಿವೆಂಟಿವ್ ಆಫೀಸರ್ ಮಂಜುನಾಥ ಆಳ್ವ, ಪ್ರಿವೆಂಟಿವ್ ಆಫೀಸರ್ (ಗ್ರೇಡ್) ನೌಶಾದ್, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಮೋಹನಕುಮಾರ್, ವಿನೋದ್ ಕೆ, ನಸರುದ್ದೀನ್ ಮತ್ತು ಚಾಲಕ ಕ್ರಿಸ್ಟಿ ಎಂಬವರು ಒಳಗೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page