ಕಾಸರಗೋಡು ಕೋ ಓಪರೇಟಿವ್ ಸ್ಟೋರ‍್ಸ್ ಆಡಳಿತ ಮಂಡಳಿಗೆ ನೂತನ ಸದಸ್ಯರ ಆಯ್ಕೆ

ಬದಿಯಡ್ಕ: ನೀರ್ಚಾಲಿನಲ್ಲಿ ಕಾರ್ಯಾಚರಿಸುತ್ತಿರುವ ಕಾಸರಗೋಡು ಕೋ ಓಪರೇಟಿವ್ ಸ್ಟೋರ್ಸ್ ಇದರ ನೂತನ ಆಡಳಿತ ಮಂಡಳಿಗೆ ಸಹಕಾರ ಭಾರತಿಯ ೭ ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2024-25ರ ಅವಧಿಗೆ ಅಧ್ಯಕ್ಷರಾಗಿ ರಾಮಕೃಷ್ಣ ಹೆಬ್ಬಾರ್ ಸೀತಾಂಗೋಳಿ, ಉಪಾಧ್ಯಕ್ಷೆಯಾಗಿ ಜಯಂತಿ ವಾಂತಿಚ್ಚಾಲು ಆಯ್ಕೆಯಾದರು. ಬಾಲಗೋಪಾಲ ಏಣಿಯರ್ಪು, ಬಾಲಸುಬ್ರಹ್ಮಣ್ಯ ಭಟ್ ಮಲ್ಲಡ್ಕ, ವಿಜಯ ರಾಮ, ವಿನೀತ ನೀರ್ಚಾಲು, ರೂಪರೇಖ ಬೇಳ ನೂತನ ಸದಸ್ಯರಾಗಿ ಆಯ್ಕೆಯಾದರು. ಇವರಿಗೆ ಸಹಕಾರ ಭಾರತಿ ನೇತೃತ್ವದಲ್ಲಿ ಅಭಿನಂದನಾ ಸಭೆ ನೀರ್ಚಾಲು ಮಾರ್ಕೆಟಿಂಗ್ ಸೊಸೈಟಿಯ ಸಭಾಭವನದಲ್ಲಿ ನಡೆಯಿತು. ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷ ಗಣೇಶ ಪಾರೆಕಟ್ಟ ಅಭಿನಂದನಾ ಭಾಷಣ ಮಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಪಟ್ಟಾಜೆ, ತಾಲೂಕು ಕಾರ್ಯದರ್ಶಿ ಗಣಪತಿ ಪ್ರಸಾದ ಕುಳಮರ್ವ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page