ಕೆಎಸ್‌ಟಿಎ ಮಂಜೇಶ್ವರ ತಾಲೂಕು ಸಮಾವೇಶ

ಮಂಜೇಶ್ವರ: ಕೇರಳ ರಾಜ್ಯ ಟೈಲರ್ಸ್ ಅಸೋಸಿಯೇಶನ್ (ಕೆ.ಎಸ್.ಟಿ.ಎ) ಮಂಜೇಶ್ವರ ತಾಲೂಕು ಸಮಾವೇಶ ಕುಂಬಳೆ ಮಾಧವ ಪೈ ಕಾಂಪ್ಲೆಕ್ಸ್ನಲ್ಲಿ ನಡೆಯಿತು. ತಾಲೂಕು ಉಪಾಧ್ಯಕ್ಷ ಗಣೇಶ್ ಪಾವೂರು ಅಧ್ಯಕ್ಷತೆ ವಹಿಸಿದರು. ರಾಜ್ಯ ಸಮಿತಿ ಕಾರ್ಯದರ್ಶಿ ಮೋಹನ್‌ದಾಸ್ ಕುಂಬಳೆ ಉದ್ಘಾಟಿಸಿ ಮಾತನಾಡಿ ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಯು ಶಂಕರನ್, ಜಿಲ್ಲಾಧ್ಯಕ್ಷ ಸುರೇಶ್ ಬದಿಯಡ್ಕ, ಬಾಲಕೃಷ್ಣ ಶೆಟ್ಟಿ ಕರಿಪ್ಪಾರ್ ಉಪಸ್ಥಿತರಿದ್ದರು. ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಆಚಾರ್ಯ ವರದಿ ವಾಚಿಸಿದರು. ಕೋಶಾಧಿಕಾರಿ ವಿಜಯ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ದಯಾನಂದ ಎಂ ಸ್ವಾಗತಿಸಿ, ಉಪಾಧ್ಯಕ್ಷ ಕೇಶವ ಮಯ್ಯ ವಂದಿಸಿದರು.

You cannot copy contents of this page