ಗಾಂಜಾ ಸಾಗಾಟ ಪ್ರಕರಣ: ಆರೋಪಿಗೆ ಕಠಿಣ ಸಜೆ, ಜುಲ್ಮಾನೆ

ಕಾಸರಗೋಡು: ಗಾಂಜಾ ಸಾಗಾಟ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ಪ್ರಿಯಾ ಕೆ. ಅವರು ಎರಡು ವರ್ಷ ಕಠಿಣ ಸಜೆ ಹಾಗೂ 20,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.  ಪಡನ್ನ ಅಲಿಕ್ಕಲಿನ ಸುಹರಾ ಮಂಜಿಲ್‌ನ ಟಿ. ರತೀಖ್ (54) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ.

2020 ಫೆಬ್ರವರಿ 12ರಂದು ಪಡನ್ನ ಸರಕಾರಿ ಆಸ್ಪತ್ರೆ ಬಳಿ ನೀಲೇಶ್ವರ ಎಕ್ಸೈಸ್ ರೇಂಜ್ ಇನ್ಸ್‌ಪೆಕ್ಟರ್ ಎ. ಸಾಧಿಕ್‌ರ ನೇತೃತ್ವದ ಅಬಕಾರಿ  ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಒಂದೂವರೆ ಕಿಲೋ ಗಾಂಜಾ ಪತ್ತೆಹಚ್ಚಿ ವಶಪಡಿಸಿಕೊಂಡಿತ್ತು. ಅದಕ್ಕೆ ಸಂಬಂಧಿಸಿ ಆರೋಪಿ ವಿರುದ್ಧ ಕೇಸು ದಾಖಲಿಸಲಾಗಿತ್ತು. ಪ್ರಸ್ತುತ ಪ್ರಕರಣದಲ್ಲಿ ಆತನಿಗೆ ಈ ಶಿಕ್ಷೆ ವಿಧಿಸಲಾಗಿದೆ.ಕಾಸರಗೋಡು ಎಕ್ಸೈಸ್ ಅಸಿಸ್ಟೆಂಟ್ ಕಮಿಷನರ್‌ಗಳಾದ ವಿನೋದ್ ಬಿ. ನಾಯರ್ ಮತ್ತು ಡಿ. ಬಾಲಚಂದ್ರನ್ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದರು. ಪ್ರೋಸಿಕ್ಯೂಷನ್ ಪರ ಹೆಚ್ಚುವರಿ ಪಬ್ಲಿಕ್ ಪ್ಲೀಡರ್ ಜಿ. ಚಂದ್ರಮೋ ಹನ್ ಮತ್ತು ಎಂ. ಚಿತ್ರಕಲ ನ್ಯಾಯಾಲಯದಲ್ಲಿ ವಾದಿಸಿದ್ದರು

Leave a Reply

Your email address will not be published. Required fields are marked *

You cannot copy content of this page