ಪೆರ್ಲ ನಾಲಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂಖ್ಯೆ- 49 ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿನ ಆಚರಿಸಲಾಯಿತು. ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಅನುಪಮ ಟಿ.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, 25 ವರ್ಷಗಳ ಹಿಂದೆ, ಭಾರತೀಯ ಸೈನ್ಯ ಪಾಕಿಸ್ತಾನಿ ನುಸುಳುಕೋರರನ್ನು ಸದೆ ಬಡಿಯುವ ಮೂಲಕ ತನ್ನ ಪರಾಕ್ರಮವನ್ನು ಇಡೀ ಜಗತ್ತಿಗೆ ಸಾರಿತ್ತು.
ಈ ದಿನವು ಭಾರತದ ಇತಿಹಾಸದಲ್ಲಿ ದೇಶದ ಸೇನೆಯ ಶೌರ್ಯ ಮತ್ತು ಧೈರ್ಯದ ಕಥೆಯನ್ನು ನೆನಪಿಸುತ್ತದೆ. ಪಾಕಿಸ್ತಾನಿ ಸೇನೆಯು ಭಾರತದ ಭೂಪ್ರದೇಶದೊಳಗೆ ನುಗ್ಗಿ ಕಾರ್ಗಿಲï‌ನ ಎತ್ತರದ ಸ್ಥಳಗಳನ್ನು ವಶಪಡಿಸಿಕೊಂಡಿತು. ಈ ದಿನವನ್ನು ದೇಶದಲ್ಲಿ ವಿಜಯ್ ದಿವಸ್ ಎಂದೇ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ರೆಜೀಶ ಅಧ್ಯಕ್ಷತೆ ವಹಿಸಿದ್ದರು. ಸ್ವಯಂಸೇವಕಿ ಶಾಲಿನಿ ಸ್ವಾಗತಿಸಿ, ಶ್ರೀಶ್ಮ ವಂದಿಸಿದರು. ಸ್ವಯಂ ಸೇವಕಿ ಖದೀಜತುಲ್ ಝಿನಾನ ನಿರೂಪಿಸಿದರು.

Leave a Reply

Your email address will not be published. Required fields are marked *

You cannot copy content of this page