ಬಜಕೂಡ್ಲು ಕ್ಲಬ್ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಪೆರ್ಲ: ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ ಇತ್ತೀಚೆಗೆ ಜರಗಿತು. ಕ್ಲಬ್ ಅಧ್ಯಕ್ಷ ನ್ಯಾಯವಾದಿ ಸಂತೋಷ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ನೂತನ ಪದಾಧಿಕಾರಿ ಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಅಧ್ಯಕ್ಷರಾಗಿ ಚಂದ್ರ ಅಮೆಕ್ಕಳ, ಉಪಾಧ್ಯಕ್ಷರಾಗಿ ಮಹೇಶ್ ಬಜಕೂಡ್ಲು, ದಯಾನಂದ ರೈ ಬಜಕೂಡ್ಲು, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಖಂಡಿಗೆ, ಕಾರ್ಯದರ್ಶಿಗಳಾಗಿ ಅಶ್ವಥ್ ಪೂಜಾರಿ, ಪ್ರವೀಣ್ ರೈ ಬಜಕೂಡ್ಲು, ಕೋಶಾಧಿಕಾರಿಯಾಗಿ ಹರೀಶ್ ಪೂಜಾರಿ ಬಜಕೂಡ್ಲು, ಕ್ರೀಡಾ ಕಾರ್ಯದರ್ಶಿಯಾಗಿ ಭರತ್‌ರಾಜ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದೀಕ್ಷಿತ್ ಬಜಕೂಡ್ಲು ಆಯ್ಕೆಯಾದರು. ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಕ್ಲಬ್‌ನ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page