ಬಾಲಕನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ :ಆರೋಪಿ ಸೆರೆ

ಕಾಸರಗೋಡು: ಹದಿನಾರರ ಹರೆಯದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿ ಯನ್ನು ವಿದ್ಯಾನಗರ ಪೊಲೀಸ್ ಠಾಣೆಯ ಎಸ್‌ಐ ಅಜೀಶ್ ವಿ.ವಿ. ಬಂಧಿಸಿದ್ದಾರೆ.

ಚೆಂಗಳ ಚೇರೂರಿನ ಅಬ್ಬಾಸ್ ಮುರ್ಶಿದ್ ಟಿ.ಎಂ. (25) ಬಂಧಿತ ಆರೋಪಿ. ಕಳೆದ ಜುಲೈ ತಿಂಗಳಲ್ಲಿ ಆರೋಪಿ ತನ್ನನ್ನು ಆತನ ಮನೆಯಲ್ಲಿ ಲೈಂಗಿಕ ಕಿರುಕುಳ ನೀಡಲೆತ್ನಿಸಿರುವುದಾಗಿ ಆರೋಪಿಸಿ ಬಾಲಕ ವಿದ್ಯಾನಗರ ಪೊಲೀಸರಿಗೆ ದೂರು ನೀಡಿದ್ದನು. ಅದರಂತೆ ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You cannot copy contents of this page