ಮಂಜೇಶ್ವರ ಚುನಾವಣಾ ತಕರಾರು ಪ್ರಕರಣ: ದಾಖಲುಪತ್ರಗಳನ್ನು ಹಾಜರುಪಡಿಸುವಂತೆ ಹೈಕೋರ್ಟ್ ನಿರ್ದೇಶ

ಕೊಚ್ಚಿ: 2021ರಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ ಯಲ್ಲಿ ಬಿಎಸ್‌ಪಿ ಅಭ್ಯರ್ಥಿ ಕೆ. ಸುಂದರರಿಗೆ ಎರಡೂವರೆ ಲಕ್ಷ ರೂ. ಹಣ ಮತ್ತು ಮೊಬೈಲ್ ನೀಡಿ ಅವರ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲಾಗಿ ದೆಯೆಂದು ದೂರಿ ನೀಡಲಾಗಿರುವ ಪ್ರಕರ ಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿದ್ದ ಬಿಜೆಪಿ ಅಭ್ಯರ್ಥಿ ಕೆ. ಸುರೇಂ ದ್ರನ್ ಮತ್ತು ಇತರ 5 ಮಂದಿಯನ್ನು ದೋಷಮುಕ್ತಿ ಗೊಳಿಸಿ  ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲ ಯದಲ್ಲಿ ವಿಚಾರಣೆ ವೇಳೆ ಸಲ್ಲಿಸಲಾಗಿದ್ದ ಎಲ್ಲಾ ದಾಖಲುಪತ್ರ ಗಳನ್ನು ಹಾಜರು ಪಡಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶ ನೀಡಿದೆ. ಸುರೇಂ ದ್ರನ್ ಸೇರಿದಂತೆ ಈ ಪ್ರಕರಣದಲ್ಲಿ ಆರೋ ಪಿಗಳನ್ನಾಗಿ ಹೆಸರಿಸಲಾಗಿದ್ದ ಜಿಲ್ಲಾ ನ್ಯಾಯಾ ಲಯ ದೋಷಮುಕ್ತಿಗೊಳಿಸಿ ತೀರ್ಪು ನೀಡಿತ್ತು. ಅದರ ವಿರುದ್ಧ ರಾಜ್ಯ ಸರಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

RELATED NEWS

You cannot copy contents of this page