ಕಾಸರಗೋಡು: ರಾಜ್ಯದಲ್ಲಿ ಮಳೆ ಇನ್ನೂ ಮುಂದುವರಿಯುತ್ತಿದ್ದು, ಅದರಿಂದಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೇಂದ್ರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಹಾಗೂ ಸುಂಟರಗಾಳಿ ಪ್ರತೀತಿ ಉಂಟಾಗಿದ್ದು, ಅದುವೆ ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳಲು ಕಾರಣವೆಂದು ಹವಾಮಾನ ಇಲಾಖೆ ತಿಳಿಸಿದೆ.