ರಸ್ತೆಗೆ ಮರ ಬಿದ್ದು ಬಸ್ ಸಂಚಾರ ಮೊಟಕು
ಉಪ್ಪಳ: ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಚಿಪ್ಪಾರು ಕಡೆಂಕೋ ಡಿಯಲ್ಲಿ ರಸ್ತೆಗೆ ಮರ ಮುರಿದು ಬಿದ್ದು ಬಸ್ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇಂದು ಬೆಳಿಗ್ಗೆ ರಸ್ತೆ ಬದಿಯ ಮರ ತುಂಡಾಗಿ ವಿದ್ಯುತ್ ತಂತಿ ಮೇಲೆ ಸಿಲುಕಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದ ಉಪ್ಪಳ-ಲಾಲ್ಬಾಗ್-ಕುರುಡಪದವು ರೂಟ್ನಲ್ಲಿ ಬಸ್ ಸಂಚಾರ ಮೊಟಕುಗೊಂಡಿದೆ. ಸಣ್ಣ ವಾಹನಗಳು ಸಂಚರಿಸುತ್ತಿವೆ.
ಮರ ವಿದ್ಯುತ್ ತಂತಿಯಲ್ಲಿ ಸಿಲುಕಿಕೊಂಡಿರುವುದರಿಂದ ಅದನ್ನು ತರೆವುಗೊಳಿಸಲು ವಿಳಂಬವಾಗಿದೆ. ವಿದ್ಯುತ್ ಕಚೇರಿಯಿಂದ ನೌಕರರು ತಲುಪಿ ಮರವನ್ನು ತೆರವುಗೊಳಿಸಿದ ಬಳಿಕವೇ ಬಸ್ ಸಂಚಾರ ಪುನರಾರಂಭಗೊಳ್ಳಲಿದೆ.