ವೃದ್ಧ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕುಂಬಳೆ: ವೃದ್ಧನೋರ್ವ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರಿಕ್ಕಾಡಿ ಪಾರೆಸ್ತಾನ ನಿವಾಸಿ ವಿಠಲ ಪೂಜಾರಿ (೭೨) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಇವರು ಬಂಬ್ರಾಣ ಭರಣಿಕಟ್ಟೆ  ಎಂಬಲ್ಲಿ ಬಡಗಿ ವೃತ್ತಿ ನಡೆಸುತ್ತಿದ್ದರು. ಮೊನ್ನೆ ಸಂಜೆ ಅಲ್ಲಿಗೆ ತೆರಳಿದ ಅವರು ಕೆಲಸದ ಶೆಡ್‌ನಲ್ಲಿ ನಿದ್ರಿಸಿದ್ದರು. ನಿನ್ನೆ ಬೆಳಿಗ್ಗೆ ಶೆಡ್‌ನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾ ಗಿದ್ದಾರೆ. ಮೃತದೇಹದ ಮರಣೋ ತ್ತರ ಪರೀಕ್ಷ  ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ನಡೆಸಿದ ಬಳಿಕ ಕುಂಟಂಗೇರಡ್ಕ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾ ಯಿತು. ಮೃತರು ಪತ್ನಿ ವಾರಿಜ, ಮಕ್ಕಳಾದ ಮಹೇಶ್, ಚಿತ್ರ, ಚಂದ್ರಕಲ, ಆಶಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page