ಹೆದ್ದಾರಿಯಲ್ಲಿ ಕಟ್ಟಿ ನಿಲ್ಲುವ ನೀರು: ಸಭೆ 18ರಂದು

ಕಾಸರಗೋಡು: ಬಿರುಸಿನ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿ ಕೆಲವು ಕಡೆಗಳಲ್ಲಿ ನೀರು ಕಟ್ಟಿ ನಿಲ್ಲುವ ವಿಷಯವನ್ನು ಚರ್ಚಿಸಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈ ತಿಂಗಳ 18ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಮಿನಿ ಕಾನ್ಫರೆನ್ಸ್ ಸಭಾಂಗಣದಲ್ಲಿ ಸಭೆ ಜರಗಲಿದೆ. ಜನಪ್ರತಿನಿಧಿಗಳು, ಗುತ್ತಿಗೆ ಕಂಪೆನಿ ಪ್ರತಿನಿಧಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಇಂಬಶೇಖರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page