ಹೊಳೆಯಲ್ಲಿ ಪತ್ತೆಯಾದ ಮೃತದೇಹದ ಗುರುತು ಇನ್ನೂ ಅಲಭ್ಯ

ಮಂಜೇಶ್ವರ: ಹೊಳೆಯಲ್ಲಿ ಜೀರ್ಣಾವಸ್ಥೆ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಬಂಗ್ರಮAಜೇಶ್ವರ ಕೊಪ್ಪಳ ಹೊಳೆಯಲ್ಲಿ ನಿನ್ನೆ ಮಧ್ಯಾಹ್ನ ಮೃತದೇಹ ಸ್ಥಳೀಯರ ಗಮನಕ್ಕೆ ಬಂದಿದೆ. 40ರಿಂದ 50 ವರ್ಷ ಪ್ರಾಯ ಅಂದಾಜಿಸುವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹ ನಗ್ನ ಸ್ಥಿತಿಯಲ್ಲಿ ಜೀರ್ಣಾವಸ್ಥೆಯಲ್ಲಿತ್ತು. ಹಲವು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಮಂಜೇಶ್ವರ ಎಸ್.ಐ ಪ್ರಶಾಂತ್ ನೇತೃತ್ವದ ಪೊಲೀಸರು ತಲುಪಿ ಮೃತದೇಹದ ಪಂಚನಾಮೆ ನಡೆಸಿ ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹದ ಗುರುತು ಪತ್ತೆಗಾಗಿ ಶ್ರಮಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You cannot copy content of this page